A new study finds that using humour to communicate about topics like AI increases a scientist's likeability and credibility.

Deep-dive

ಬೆಂಗಳೂರು

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಂಶೋಧಕರ ಒಂದು ತಂಡ ಪಶ್ಚಿಮ ಘಟ್ಟಗಳ ಹಾವುಗಳನ್ನು ಕ್ರಮಬದ್ಧವಾಗಿ ಅಧ್ಯಯನ ನಡೆಸಲು ಪ್ರಯತ್ನಿಸುತ್ತಿದ್ದರು. ಈ ಕ್ರಮಬದ್ಧ ಅಧ್ಯಯನ ನಡೆಸುವಾಗ ಪಶ್ಚಿಮ ಘಟ್ಟಗಳ ಕಾಡುಗಳಿಗೆ ಸ್ವಂತವಾದ “ಪ್ರೊಹೇಟುಲ್ಲಾ ಆಂಟಿಕಾ” ಎನ್ನುವ ಒಂದು ಬಳ್ಳಿಹಾವನ್ನು ಅಕಸ್ಮಾತಾಗಿ ಕಂಡರು. ಇದು ಒಂದು ಪುರಾತನ ಪ್ರಭೇದವೆಂದು, ಸುಮಾರು ೨೬ ಮಿಲಿಯನ್ ವರುಷಗಳ ಹಿಂದೆ, ಮಧ್ಯ ಒಲಿಗೋಸೀನ್ ಯುಗದಲ್ಲಿ ವಿಕಾಸನಗೊಂಡಿತೆಂದು ಅಂದಾಜಿಸಲಾಗಿದೆ.

ಬೆಂಗಳೂರು

ಭಾರತ - ಜಗತ್ತಿನ ಅತೀ ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಗಳಲ್ಲಿ ಅಗ್ರ ರಾಷ್ಟ್ರ. ಜೊತೆಗೆ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಎರಡನೇ ರಾಷ್ಟ್ರ. ಆದರೆ ದುರದೃಷ್ಟದ ಸಂಗತಿಯೇನು ಗೊತ್ತೆ? ಭಾರತದ ಸುಮಾರು 15% ಜನ ಇಂದಿಗೂ ಕತ್ತಲೆಯಲ್ಲೆ ಜೀವನ ನಡೆಸುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಕೇವಲ ಸರ್ಕಾರ ಎಂದರೆ ತಪ್ಪಾಗಬಹುದು. ಭಾರತದ ವಿದ್ಯುತ್ ಪೂರೈಕೆಗೆ ಒಂದೆಡೆ ಅರ್ಥಿಕ ಹಾಗೂ ನೈಸರ್ಗಿಕ ಸಂಪನ್ಮೂಲದ ಕೊರತೆ ಇದ್ದರೆ, ಇನ್ನೊಂದೆಡೆ ಪರಿಸರ ರಕ್ಷಣೆಯ ದೊಡ್ಡ ಜವಾಬ್ದಾರಿಯೂ ತಡೆಯಾಗಿ ನಿಂತಿದೆ. ವಿಶ್ವದ ಅನೇಕ ದೇಶಗಳು ಈಗಾಗಲೆ ನವೀಕರಿಸಬಹುದಾದ ಇಂಧನಗಳ ಸಂಪೂರ್ಣ ಉಪಯೋಗವನ್ನು ಪಡೆದುಕೊಳ್ಳತೊಡಗಿವೆ.

ಬೆಂಗಳೂರು

2015ರಲ್ಲಿ, ಅದೊಂದು ಮಾಮೂಲು ಸುದಿನ. ಪುಣೆಯ ಅಘರ್ಕರ್ ಸಂಶೋಧನಾ ಕೇಂದ್ರದ, ವಿಜ್ಞಾನಿಯಾದ ಡಾ. ರಿತೇಶ್ ಕುಮಾರ್ ಚೌಧರಿಯನ್ನು ಕಾಣಲು ಬಂದಿದ್ದ, ಬೆಂಗಳೂರಿನ ಎಂ. ಈ. ಎಸ್. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಜಿ. ರಾಮಚಂದ್ರ ರಾವ್, ಉತ್ತರ ಕನ್ನಡ ಜಿಲ್ಲೆಯಿಂದ, ಚಿಕ್ಕ ಹೂಗಳಿರುವ, ಹುಲ್ಲಿನಂತೆ ಕಾಣುವ ಕೆಲ ಗಿಡಗಳ ಮಾದರಿಗಳನ್ನು ತಂದು, ಅದನ್ನು ಗುರುತಿಸಲು ಡಾ. ಚೌಧರಿಯ ಸಹಾಯ ಕೋರಿದರು. ಡಾ. ಚೌಧರಿಯವರು ಅದನ್ನು ಕೂಡಲೇ ಒಂದು ‘ಪೈಪ್ವರ್ಟ್’ ಅಥವಾ ಹೂಬಿಡುವ ಏಕದಳದ ಒಂದು ಪ್ರಭೇದ ಎಂದು ಗುರುತಿಸಿದರು. ಆದರೆ, ಇದು ಯಾವ ಪ್ರಭೇದವೆನ್ನುವುದು ಒಂದು ದೊಡ್ಡ ಯಕ್ಷ ಪ್ರಶ್ನೆಯಾಗಿತ್ತು!

ಬೆಂಗಳೂರು

ಜಾಗತಿಕವಾಗಿ, ಹುಟ್ಟಿದ ನಂತರ ಕಿವುಡುತನದ ಪರೀಕ್ಷೆಗೆ ಒಳಪಡುವ ಪ್ರತಿ 1000 ಹಸುಗೂಸುಗಳಲ್ಲಿ 6 ಮಕ್ಕಳು ಕಿವುಡುತನದ ಸಮಸ್ಯೆಯಿಂದ ಬಳಲುತ್ತಿರುತ್ತಾರೆ ಮತ್ತು ಅವರಲ್ಲಿ  200ಕ್ಕಿಂತಲೂ ಕಡಿಮೆ ಮಕ್ಕಳಿಗೆ ಮಾತ್ರ ವಾಕ್ ಚಿಕಿತ್ಸಕರು ಲಭ್ಯವಿದ್ದಾರೆ. ಭಾರತದಂತಹ ದೇಶಗಳಲ್ಲೂ ಪರಿಸ್ಥಿತಿ ಕೆಟ್ಟದಾಗಿದ್ದು, ಬಡತನದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಿರುತ್ತದೆ  ಮತ್ತು ಆರೋಗ್ಯ ಸೇವೆಗಳು ಅಷ್ಟು ಸುಲಭವಾಗಿ ಲಭ್ಯವಿರುವುದಿಲ್ಲ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಸಂಶೋಧಕರು ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ, ಭಾರತೀಯ ಸನ್ನಿವೇಶದಲ್ಲಿ ವಿಶೇಷವಾಗಿ ಉಪಯುಕ್ತವಾಗುವ ಒಂದು ಶ್ರವಣ ಸಾಧನವನ್ನು ರೂಪಿಸಿದ್ದಾರೆ.

ಬೆಂಗಳೂರು

ಇತ್ತೀಚಿನ ಅಧ್ಯಯನವೊಂದರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಂಶೋಧಕರು, ನಗರೀಕರಣವು ಹೇಗೆ ಓತಿಕೇತಗಳ ಸಾಮಾಜಿಕ ನಡವಳಿಕೆ ಮತ್ತು ಕಾರ್ಯತಂತ್ರಗಳನ್ನುರೂಪಿಸುತ್ತದೆ ಎಂದು ವಿವರಿಸಿದ್ದಾರೆ. ಸಂಶೋಧಕರು ತಮ್ಮ ಅಧ್ಯಯನವನ್ನು ದಕ್ಷಿಣ ಭಾರತದ ಗುಡ್ಡಗಾಡು ಪ್ರದೇಶಗಳಲ್ಲಿ ಸರ್ವೇಸಾಮಾನ್ಯವಾಗಿ ವಾಸಿಸುವ ದಕ್ಷಿಣ ಭಾರತದ ಒಂದು ಬಗೆಯ ಓತಿಕೇತ, ರಾಕ್ ಅಗಾಮಗಳ (ಸಾಮ್ಮೊಫಿಲಸ್ ಡೋರ್ಸಲಿಸ್) ಮೇಲೆ ಕೈಗೊಂಡಿದ್ದಾರೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಗಂಡು ಓತಿಕೇತಗಳು ಇತರೇ ಗಂಡು ಮತ್ತು ಹೆಣ್ಣು  ಓತಿಕೇತಗಳೊಂದಿಗೆ ಪರಸ್ಪರ ಹೇಗೆ ವರ್ತಿಸುತ್ತವೆ ಎಂಬುದನ್ನು ಅವರು ಅಧ್ಯಯನ ಮಾಡಿದ್ದಾರೆ.

ಬೆಂಗಳೂರು

ನಮ್ಮ ಬೆಂಗಳೂರಿನ ವಾಹನಗಳು ಟ್ರಾಫಿಕ್ ನ ಸಮಸ್ಯೆಯಿಂದ ವೇಗವಾಗಿ ಚಲಿಸದೇ ಇರಬಹುದು. ಆದರೆ ಬೆಳವಣಿಗೆಯ ದೃಷ್ಟಿಯಿಂದ ಬೆಂಗಳೂರು ಇಂದಿಗೂ ಕೂಡ ಅತೀ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದು.ಹೀಗೆ ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ, ‘ನಗರ ಸುಧಾರಣೆಯ’ ಮೂಲ ಅರ್ಥ ನಮ್ಮೆಲ್ಲರ ದೃಷ್ಟಿಯಲ್ಲಿ ರಸ್ತೆ, ನೀರು , ನೈರ್ಮಲ್ಯಾಭಿವೃದ್ಧಿ, ಅನಿಯಮಿತ ವಸತಿಗಳ ನಿರ್ಮೂಲನೆ ಇತ್ಯಾದಿ ಆಗಿರಬಹುದು. ಇಂತಹ ಯೋಜನೆಗಳನ್ನು ನಾವು ದಿನಬೆಳಗಾದರೆ ದಿನಪತ್ರಿಕೆಗಳಲ್ಲಿ, ದೂರದರ್ಶನಗಳಲ್ಲಿ ವ್ಯಾಪಕವಾಗಿ ನೋಡುತ್ತೇವೆ ಕೂಡ.

ಬೆಂಗಳೂರು

ನಾವು ಯಾರನ್ನಾದರೂ “ಹೆಚ್ಚು ಅರಣ್ಯಗಳನ್ನು ಬೆಳೆಸಬೇಕೆ” ಎಂದು ಕೇಳಿದರೆ, ಸಾಮಾನ್ಯವಾಗಿ "ಖಂಡಿತವಾಗಲೂ ಬೆಳೆಸಬೇಕು; ಅರಣ್ಯಗಳು ಜಾಗತಿಕ ತಾಪಮಾನ ಏರಿಕೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತವೆ" ಎಂದೋ, "ಕಾಡು ಸಾವಿರಾರು ಜೀವಿಗಳ ಆವಾಸಸ್ಥಾನ" ಎಂದೋ ಉತ್ತರ ಕೇಳಿಬರುತ್ತದೆ. ಆದರೆ, ಈಗಿರುವ ಒಂದು ಬಗೆಯ ಭೂದೃಶ್ಯವನ್ನು ಕೃತಕವಾಗಿ ಕಾಡನ್ನಾಗಿ ಬದಲಾಯಿಸುವುದು ಎಲ್ಲಾ ಸಂದರ್ಭಗಳಲ್ಲಿ ಅತ್ಯುತ್ತಮ ಆಯ್ಕೆಯಲ್ಲ ಎಂಬುದು ನಿಮಗೆ ತಿಳಿದಿದೆಯೇ? ಹೌದು, ಕಾಡು ಬೆಳೆಸುವುದೆಂದರೆ ಒಳ್ಳೆಯದೇ ಎಂಬ ನಮ್ಮ ದೃಢವಾದ ನಂಬಿಕೆಗೆ ವ್ಯತಿರಿಕ್ತವಾಗಿ, ಕೃತಕವಾಗಿ ಕಾಡುಗಳನ್ನು ಬೆಳೆಸುವುದು ಕೆಲವೊಮ್ಮೆ ಒಳ್ಳೆಯದಕ್ಕಿಂತ ಹೆಚ್ಚಿನ ಹಾನಿಯನ್ನೇ ಮಾಡುತ್ತದೆ.

ಬೆಂಗಳೂರು

ವೈವಿಧ್ಯತೆಯಲ್ಲಿ ಶ್ರೀಮಂತವೆನಿಸಿದ ತಾಣವಾದ ಭಾರತದಲ್ಲಿ ಹಲವಾರು ಬಗೆಯ ಸಂಸ್ಕೃತಿಗಳನ್ನು ನಾವು ಕಾಣಬಹುದು. ಇಲ್ಲಿ ಮಾತನಾಡಲಾಗುವ ಹೆಚ್ಚಿನ ಸಂಖ್ಯೆಯ ಭಾಷೆಗಳೇ ಇದಕ್ಕೆ ಒಂದು ಪ್ರಮಾಣಪತ್ರವಾಗಿದೆ. ಈ ಭಾಷೆಗಳನ್ನು ಕಲಿಯುವುದು ಆಸಕ್ತಿಕರವೇನೋ ಹೌದು; ಜೊತೆಗೇ, ಅವುಗಳನ್ನು ಅಧ್ಯಯನ ಮಾಡುವುದು ಇನ್ನೊಂದು ಕಾರಣಕ್ಕಾಗಿ ಆಕರ್ಷಕವಾಗಿದೆ; ಅದೇನೆಂದರೆ ಭಾರತೀಯ ಆರ್ಯ ಭಾಷಿಕರು ಕ್ರಿಸ್ತ ಪೂರ್ವ ೧೫೦೦ರಲ್ಲಿ ಆಗಮಿಸುವ ಮೊದಲು, ಭಾರತೀಯ ಉಪಖಂಡದಲ್ಲಿ ವಾಸವಾಗಿದ್ದ ದ್ರಾವಿಡರ ಅಲ್ಪ-ಪ್ರಸಿದ್ಧ ಇತಿಹಾಸವನ್ನು ಅರ್ಥಮಾಡಿಕೊಳ್ಳಲು ಈ ಭಾಷೆಗಳು ನಮಗೆ ಸಹಾಯ ಮಾಡುತ್ತವೆ. ಇಲ್ಲಿಯವರೆಗೆ, ದ್ರಾವಿಡರ ಮೂಲ ಮತ್ತು ದೇಶದಾದ್ಯಂತ ಅವರ ಪ್ರಸರಣದ ಬಗ್ಗೆ ಹೆಚ್ಚು ತಿಳಿದಿಲ್ಲ.

ಹೊಸ ದೆಹಲಿ

ಪಶ್ಚಿಮಘಟ್ಟಗಳ ಕಾಡುಗಳು ಭಾರತದ ಜೀವವೈವಿಧ್ಯದ ಹಾಟ್ಸ್ಪಾಟ್ ಎಂದೇ ಹೆಸರುವಾಸಿ. ಇತ್ತೀಚಿನ ವರ್ಷಗಳಲ್ಲಿ, ಈ ಸಮೃದ್ಧ ಪರಿಸರ ವ್ಯವಸ್ಥೆಗಳಲ್ಲಿ ವಾಸಿಸುವ ಹಲವು ಹೊಸ ಜಾತಿಯ ಉಭಯವಾಸಿಗಳು ಮತ್ತು ಸರೀಸೃಪಗಳು ಪತ್ತೆಯಾಗಿವೆ. ಆದರೆ, ಈ ಬಾರಿ, ಉಭಯಚರಗಳ ಬಗ್ಗೆ ಅಧ್ಯಯನ ನಡೆಸುವ ದೆಹಲಿಯ ವಿಶ್ವವಿದ್ಯಾನಿಲಯದ ಸಂಶೋಧಕರು, ರಸ್ತೆಬದಿಯ ಕೆಸರುಗುಂಡಿಯಂತಹ ಸರಳವಾದ ಸ್ಥಳದಲ್ಲಿ ಅಡಗಿದ್ದ ಹೊಸ ಜಾತಿಯ ಕಪ್ಪೆಯನ್ನು ಕಂಡುಹಿಡಿದಿದ್ದಾರೆ! ಭಾರತ ಸರ್ಕಾರದ ‘ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ’ಯ ಕ್ರಿಟಿಕಲ್ ಇಕೋಸಿಸ್ಟಮ್ ಪಾರ್ಟ್ನರ್ಶಿಪ್ ಫಂಡ್ನಿಂದ ಮತ್ತು ದೆಹಲಿ ವಿಶ್ವವಿದ್ಯಾಲಯದಿಂದ ಅನುದಾನ ಪಡೆದ ತಮ್ಮ ಈ ಸಂಶೋಧನೆಯನ್ನು ‘ಸೈಂಟಿಫಿಕ್ ರಿಪೋರ್ಟ್ಸ್’ ಜರ್ನಲ್ನಲ್ಲಿ ಅವರು ವಿವರಿಸಿದ್ದಾರೆ.

Search Research Matters