A new study finds that using humour to communicate about topics like AI increases a scientist's likeability and credibility.

Ecology

ಹೊಸ ದೆಹಲಿ

ಪಶ್ಚಿಮಘಟ್ಟಗಳ ಕಾಡುಗಳು ಭಾರತದ ಜೀವವೈವಿಧ್ಯದ ಹಾಟ್ಸ್ಪಾಟ್ ಎಂದೇ ಹೆಸರುವಾಸಿ. ಇತ್ತೀಚಿನ ವರ್ಷಗಳಲ್ಲಿ, ಈ ಸಮೃದ್ಧ ಪರಿಸರ ವ್ಯವಸ್ಥೆಗಳಲ್ಲಿ ವಾಸಿಸುವ ಹಲವು ಹೊಸ ಜಾತಿಯ ಉಭಯವಾಸಿಗಳು ಮತ್ತು ಸರೀಸೃಪಗಳು ಪತ್ತೆಯಾಗಿವೆ. ಆದರೆ, ಈ ಬಾರಿ, ಉಭಯಚರಗಳ ಬಗ್ಗೆ ಅಧ್ಯಯನ ನಡೆಸುವ ದೆಹಲಿಯ ವಿಶ್ವವಿದ್ಯಾನಿಲಯದ ಸಂಶೋಧಕರು, ರಸ್ತೆಬದಿಯ ಕೆಸರುಗುಂಡಿಯಂತಹ ಸರಳವಾದ ಸ್ಥಳದಲ್ಲಿ ಅಡಗಿದ್ದ ಹೊಸ ಜಾತಿಯ ಕಪ್ಪೆಯನ್ನು ಕಂಡುಹಿಡಿದಿದ್ದಾರೆ! ಭಾರತ ಸರ್ಕಾರದ ‘ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ’ಯ ಕ್ರಿಟಿಕಲ್ ಇಕೋಸಿಸ್ಟಮ್ ಪಾರ್ಟ್ನರ್ಶಿಪ್ ಫಂಡ್ನಿಂದ ಮತ್ತು ದೆಹಲಿ ವಿಶ್ವವಿದ್ಯಾಲಯದಿಂದ ಅನುದಾನ ಪಡೆದ ತಮ್ಮ ಈ ಸಂಶೋಧನೆಯನ್ನು ‘ಸೈಂಟಿಫಿಕ್ ರಿಪೋರ್ಟ್ಸ್’ ಜರ್ನಲ್ನಲ್ಲಿ ಅವರು ವಿವರಿಸಿದ್ದಾರೆ.

ಬೆಂಗಳೂರು

ಯುನೈಟೆಡ್ ಕಿಂಗ್ಡಮ್ನ ಪ್ಲೈಮೌತ್ ವಿಶ್ವವಿದ್ಯಾಲಯ, ಅಮೇರಿಕಾದ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯ,  ಲಂಡನ್ ನ ಇಂಪೀರಿಯಲ್ ಕಾಲೇಜ್ ಮತ್ತು ಭಾರತದ ಟಾಟಾ ಸಮಾಜ ವಿಜ್ಞಾನ ಸಂಸ್ಥೆಯ ಸಂಶೋಧಕರು ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಪಶ್ಚಿಮ ಘಟ್ಟಗಳ ಉತ್ತರ ಭಾಗದಲ್ಲಿನ ಬಂಡೆಗಳಿಂದಾವೃತವಾದ ಪ್ರಸ್ಥಭೂಮಿಗಳಲ್ಲಿ ‘ಬ್ಯಾಟ್ರಾಕೊಖೈಟ್ರಿಯಮ್ ಡೆಂಡ್ರೊಬಾಟಿಡಿಸ್’ನ ಪ್ರಭುತ್ವವನ್ನು ಶೋಧಿಸಿದ್ದಾರೆ. 

ಮುಂಬಾಯಿ

ಕರ್ನಾಟಕದ ದಕ್ಷಿಣದಲ್ಲಿರುವ, ಐತಿಹಾಸಿಕವಾಗಿ ಬಂಟ್ವಾಳ ನದಿ ಎಂದು ಕರೆಯಲ್ಪಡುವ ನೇತ್ರಾವತಿ ನದಿಯ ಪ್ರವಾಹವು, ನೈರುತ್ಯ ಮಾನ್ಸೂನ್ ಸಮಯದಲ್ಲಿ ಕಂಡುಬರುವ ಸಾಮಾನ್ಯ ದೃಶ್ಯವಾಗಿದೆ. ಬಂಟ್ವಾಳ ಪಟ್ಟಣದ ಸ್ಥಳೀಯ ನಿವಾಸಿಗಳು ಇನ್ನೂ 1974 ರಲ್ಲಿ ನದಿಯ ನೀರಿನ ಪ್ರಮಾಣ ಜಾಸ್ತಿಯಾಗಿ ಅದು ಉಕ್ಕಿ ಹರಿದಾಗ ಉಂಟಾದ ವಿನಾಶಕಾರಿ ಪ್ರವಾಹದಿಂದ ಹೊರಬಂದು ಪುನಃ ಬದುಕು ಕಟ್ಟಿಕೊಳ್ಳುತ್ತಿರುವಾಗಲೇ ಮತ್ತೆ ಇದು ಇತ್ತೀಚೆಗೆ 2013 ಮತ್ತು 2015 ರಲ್ಲಿ ಹಾಗೂ 2018 ರಲ್ಲಿ ಪುನರಪ್ಪಳಿಸಿದೆ. ನದಿಯ ನೀರಿನ ಮಟ್ಟದಲ್ಲಿ ಉಂಟಾಗುತ್ತಿರುವ ಎಲ್ಲಾ ಬದಲಾವಣೆಗಳಿಗೆ ಮಳೆ ಸುರಿತದ ಏರಿಳಿತಗಳು ಕಾರಣವೇ?

ಬೆಂಗಳೂರು

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಶ್ರೀಕಾಂತ್ ದೇವಧರ್ ಮತ್ತು ಕವಿತಾ ಈಶ್ವರನ್ ರವರು, ಅತ್ಯಂತ ಆಕರ್ಷಕವಾದ ಪುರುಷ ಅಗಾಮಗಳು (ಹಲ್ಲಿಗಳು) ಪ್ರದರ್ಶಿಸುವ ವಿವಿಧ ವರ್ತನೆಯ ಸಂಕೇತಗಳ ಅರ್ಥವನ್ನು ಡಿಕೋಡ್ ಮಾಡಲು ತಮ್ಮ ಹೊಸ ಅಧ್ಯಯನದಲ್ಲಿ ಪ್ರಯತ್ನಿಸಿದ್ದಾರೆ.

ಮುಂಬಾಯಿ

ಇತ್ತೀಚೆಗೆ ಭಾರತದೊಳಗೆ ಆಲಿವ್ ರಿಡ್ಲೆ ಆಮೆಗಳ ಮರುಪ್ರವೇಶವು, ವಲಸೆ ಬಂದ ಪ್ರಾಣಿಗಳಿಗೆ ಭಾರತೀಯ ಕರಾವಳಿಗಳು ಅಚ್ಚುಮೆಚ್ಚಿನ ತಾಣ ಎಂಬುದನ್ನು ತೋರಿಸಿಕೊಟ್ಟಿದೆ. ಭಾರತದ ೭೫೦೦ ಕಿಲೋಮೀಟರ್ ಉದ್ದದ ಅತಿದೊಡ್ಡ ಕರಾವಳಿಯು, ವಿವಿಧ ಸಸ್ಯ ಮತ್ತು ಪ್ರಾಣಿಗಳ ನೆಲೆಯಾಗಿದೆ; ದೇಶದ ಒಟ್ಟು ಜನಸಂಖ್ಯೆಯ ಸುಮಾರು ೪೦% ಜನರು, ಇದೇ ಕರಾವಳಿಯುದ್ದಕ್ಕೂ ವಾಸಿಸುತ್ತಿದ್ದಾರೆ. ಕರಾವಳಿಯುದ್ದಕ್ಕೂ ನಡೆಯುವ ಅಭಿವೃದ್ಧಿ ಚಟುವಟಿಕೆಗಳು, ಕರಾವಳಿಯ ಪರಿಸರ ವ್ಯವಸ್ಥೆಯನ್ನು ಹಾನಿಗೊಳಿಸುತ್ತವೆ.

ಹಾವು… ಎಂದೊಡನೆ, ತಕ್ಷಣ ಭಯಭೀತರಾಗುವುದು ಸಹಜ. “ಎಲ್ಲಿ ನಮ್ಮನ್ನು ವಿಷವಿಕ್ಕಿ ಕಡಿಯುವುದೋ.. ಎಲ್ಲಿ ನಮ್ಮ ಮುಂದೆ ಬೆಚ್ಚಿ ಬೀಳಿಸುವಂತೆ ಹೆಡೆ ಎತ್ತಿ ನಿಲ್ಲುವುದೋ..” ಹೀಗೆ, ಎಷ್ಟೋ ತರಹದ ನಕಾರಾತ್ಮಕ, ಭಯಾನಕ ಯೋಚನೆಗಳು ನಮ್ಮ ಸೂಕ್ಷ್ಮ ಮನಸುಗಳ ಒಳಹೊಕ್ಕುವುದು ಆಶ್ಚರ್ಯವೇನಲ್ಲ. ಬಹುತೇಕ ಮಂದಿ ಭಾವಿಸಿರುವಂತೆ, ಪ್ರಪಂಚದಲ್ಲಿ ಕಾಣಸಿಗುವಂತಹ ಎಲ್ಲ ಹಾವುಗಳು ವಿಷಕಾರಿಯಲ್ಲ. ಹಾಗೆ ನೋಡಿದರೆ, ವಿಷಕಾರಿ ಹಾವುಗಳಿಗಿಂತ, ವಿಷರಹಿತ ಹಾವುಗಳ ಪ್ರಭೇದಗಳ ಸಂಖ್ಯೆಯೇ ಹೆಚ್ಚ್ಚು. ನಮ್ಮ ದೇಶದಲ್ಲಿಯೇ, ಈವರೆಗೆ ಸುಮಾರು ೨೭೫ ಹಾವಿನ ಪ್ರಭೇದಗಳಲ್ಲಿ, ಸುಮಾರು ೬೦ ಪ್ರಭೇದಗಳು ಮಾತ್ರ ವಿಷಕಾರಿ.

Bengaluru

ಹೊಸ ವರ್ಷ ಬಂದಾಯಿತು, ಆದರೆ ನಾವಿನ್ನು ೨೦೧೮ರ ವರ್ಷಾಗಮನವನ್ನು ಕಳೆದ ವರ್ಷದಲ್ಲಿ ಪ್ರಾರಂಭಿಸಿದ ಕೆಲವು ಚಟುವಟಿಗೆಗಳನ್ನು ಮೆಲಕು ಹಾಕುತ್ತಿದ್ದೇವೆ. ಅವುಗಳಲ್ಲಿ ಪ್ರಮುಖವಾದುದ್ದು  ಪ್ರಾದೇಶಿಕ ಭಾಷೆಗಳಲ್ಲಿ ವೈಜ್ಞಾನಿಕ ಲೇಖನಗಳನ್ನು ಹೊರತರುವುದು. ಪ್ರಾರಂಭಿಕವಾಗಿ ನಾವು ಮೊದಲು ಕನ್ನಡದಲ್ಲಿ ಲೇಖನಗಳನ್ನು ಈಗ ಕಳೆದು ಮೂರು-ನಾಲ್ಕು ವರ್ಷಗಳಿಂದ ಬರೆಯುತ್ತಿದ್ದೇವೆ. ಇದಕ್ಕೆ ನಮಗೆ 'ಪ್ರಜಾವಾಣಿ'ಯಿಂದಲೂ ಬಹಳಷ್ಟು ಪ್ರೋತ್ಸಾಹ ದೊರೆಯಿತು. ಪ್ರತಿ ಸೋಮವಾರ, 'ವಿಜ್ಞಾನ ಲೋಕದಿಂದ' ಎಂಬ ಅಂಕಣದಲ್ಲಿ ನಮ್ಮ ಲೇಖನಗಳು ಮುದ್ರಣವಾಗುತ್ತಿತ್ತು. ಕಳೆದ ವರ್ಷ ನಾವು ಹಿಂದಿ, ಮರಾಠಿ ಮತ್ತು ಅಸ್ಸಾಮೀಸ್ ನಲ್ಲೂ ಲೇಖನಗಳನ್ನು ಪ್ರಕಟಿಸಲು ಪ್ರಾರಂಭಿಸಿದೆವು. ಈ ವರ್ಷ ಇನ್ನಷ್ಟು ಪ್ರಾದೇಶಿಕ ಭಾಷೆಗಳಲ್ಲಿ  ಬಹಳಷ್ಟು ಲೇಖನಗಳು, ಪಾಡ್ಕ್ಯಾಸ್ಟ್ಗಳು, ಮತ್ತು ಇತರೆ ರೀತಿಯಲ್ಲಿ ಪ್ರಕಟಿಸಬೇಕೆಂದಿದ್ದೇವೆ. ಇಲ್ಲಿ ಕಳೆದ ವರ್ಷ ಪ್ರಾದೇಶಿಕ ಭಾಷೆಯಲ್ಲಿ ಪ್ರಕಟಿಸಿದ ಕೆಲವು ಆಯ್ದ ಲೇಖನಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇವೆ.

ಬೆಂಗಳೂರು

ಒಂದು ಕಾಲದಲ್ಲಿ ಶ್ವೇತವರ್ಣದ ಹಿಮವರ್ಷಗಳಿಂದ ಕಂಗೊಳಿಸುತ್ತಿದ್ದ, ಚಳಿಗಾಲದಲ್ಲಿ ತನ್ನದೆ ಆದ ವೈಶಿಷ್ಟ್ಯತೆಗಳಿಂದ ವಿಶ್ವದ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ ಶಿಮ್ಲಾದ ಪ್ರಖ್ಯಾತ ಪಟ್ಟಣ ಇಂದು ಇತಿಹಾಸದಲ್ಲೇ ಕಂಡು ಕೇಳರಿಯದ ನೀರಿನ ಬಿಕ್ಕಟ್ಟನ್ನು ಅನುಭವಿಸುತ್ತಿದೆ. ೨೦೧೫-೧೬ ಅವಧಿಯಲ್ಲಿ ಆವರಿಸಿದ ಬರಗಾಲವು ಮರಾಠಾವಾಡಾದ ರೈತರ ಜೀವನವನ್ನು ಸಂಪೂರ್ಣವಾಗಿ ದಿಕ್ಕೆಟ್ಟಿಸಿತ್ತು. ಇಂತಹ ಅನೇಕ ಸಂದರ್ಭಗಳು, ಸನ್ನಿವೇಶಗಳು, ಭಾರತದಲ್ಲಿ ನದಿಗಳ ಮಹತ್ವ ಏನೆಂಬುದನ್ನು ತೋರಿಸಿಕೊಟ್ಟಿವೆ. ನದಿಗಳು ನಮ್ಮ ದೇಶದೊಂದಿಗೆ ಕೇವಲ ನೈಸರ್ಗಿಕವಾದ ಸಂಬಂಧವನ್ನು ಹೊಂದಿಲ್ಲ; ನಾಡಿನ ಜನರ ನಾಡಿಮಿಡಿತದೊಂದಿಗೆ ಭಾವನಾತ್ಮಕವಾದ ಸಂಬಂಧವನ್ನೂ ಹೊಂದಿವೆ.

ಬೆಂಗಳೂರು

ಮನೆಮನೆಗಳಲ್ಲಿ ಮುದ್ದು ನಾಯಿಮರಿಗಳನ್ನು ಸಾಕುವುದು ಇಂದು ನಿನ್ನೆಯಿಂದ ಪ್ರಾರಂಭವಾದದ್ದಲ್ಲ; ಮಾನವ, ಅಲೆಮಾರಿ ಜೀವನಕ್ಕೆ ಬೆನ್ನುಮಾಡಿ, ಒಂದೆಡೆ ವಾಸ್ತವ್ಯ ಹೂಡುವುದನ್ನು ಕಲಿಯುವುದಕ್ಕೆ ಮುನ್ನವೂ, ಅವನೊಂದಿಗೆ ಹೋದಲ್ಲೆಲ್ಲಾ ಹಿಂಬಾಲಿಸಿಕೊಂಡು ಹೋಗುತ್ತಿದ್ದು, ವಾಸ್ತವ್ಯ ಹೂಡುತ್ತಿದ್ದಂತೆ ತಾನೂ ಅಲ್ಲೇ ಮೊಕ್ಕಾಂ ಹೂಡಿದ ಮೊದಲ ಪ್ರಾಣಿಗಳಲ್ಲಿ ನಾಯಿಯೂ ಒಂದು! ಆದರೆ, ಸಾಕುಪ್ರಾಣಿಯಾಗಿರಬೇಕಾದ ನಾಯಿಗಳು ಹಲವಾರು ಕಾರಣಗಳಿಂದ ಬೀದಿಯ ಪಾಲಾಗುತ್ತಿರುವುದು ವಿಪರ್ಯಾಸ ಹಾಗೂ ಹಲವು ಸಮಸ್ಯೆಗಳ ಮೂಲವೂ ಹೌದು.

ಬೆಂಗಳೂರು

'ಸೈನ್ಸ್' ನಿಯತಕಾಲಿಕೆಯಲ್ಲಿ ಪ್ರಕಟವಾದ ಲೇಖನವೊಂದರಲ್ಲಿ, ಜೀವವೈವಿಧ್ಯತೆಯ ಒಡಂಬಡಿಕೆಯೇ ಜೀವವೈವಿಧ್ಯತೆಯ ಸಂಶೋಧನೆಗಳ ಮೇಲೆ ಮಿತಿ ಹೇರುವುದನ್ನು ಪ್ರಶ್ನಿಸಿ, ಬೇಲಿಯೇ ಎದ್ದು ಹೊಲ ಮೇದಂತಾಯ್ತು ಎಂದು ಟೀಕಿಸಲಾಗಿದೆ. 

Search Research Matters