ಭಾರತದ ಹಕ್ಕಿಗಳ ವೈವಿಧ್ಯ ತೀವ್ರ ಗತಿಯಿಂದ ಕ್ಷೀಣಿಸುತ್ತಿದೆ. ಅವನ್ನು ಉಳಿಸಲು, ತುರ್ತು ಸಂರಕ್ಷಣಾ ಕ್ರಮಗಳು ಅಗತ್ಯ ಎನ್ನುತ್ತದೆ ಇತ್ತೀಚೆಗೆ ಪ್ರಕಟವಾದ ಭಾರತೀಯ ಹಕ್ಕಿಗಳ ಸ್ಥಿತಿಗತಿಯ ಕುರಿತ ಒಂದು ಸಂಶೋಧನಾ ವರದಿ.

Health

ಬೆಂಗಳೂರು

ಜಾಗತಿಕವಾಗಿ, ಹುಟ್ಟಿದ ನಂತರ ಕಿವುಡುತನದ ಪರೀಕ್ಷೆಗೆ ಒಳಪಡುವ ಪ್ರತಿ 1000 ಹಸುಗೂಸುಗಳಲ್ಲಿ 6 ಮಕ್ಕಳು ಕಿವುಡುತನದ ಸಮಸ್ಯೆಯಿಂದ ಬಳಲುತ್ತಿರುತ್ತಾರೆ ಮತ್ತು ಅವರಲ್ಲಿ  200ಕ್ಕಿಂತಲೂ ಕಡಿಮೆ ಮಕ್ಕಳಿಗೆ ಮಾತ್ರ ವಾಕ್ ಚಿಕಿತ್ಸಕರು ಲಭ್ಯವಿದ್ದಾರೆ. ಭಾರತದಂತಹ ದೇಶಗಳಲ್ಲೂ ಪರಿಸ್ಥಿತಿ ಕೆಟ್ಟದಾಗಿದ್ದು, ಬಡತನದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಿರುತ್ತದೆ  ಮತ್ತು ಆರೋಗ್ಯ ಸೇವೆಗಳು ಅಷ್ಟು ಸುಲಭವಾಗಿ ಲಭ್ಯವಿರುವುದಿಲ್ಲ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಸಂಶೋಧಕರು ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ, ಭಾರತೀಯ ಸನ್ನಿವೇಶದಲ್ಲಿ ವಿಶೇಷವಾಗಿ ಉಪಯುಕ್ತವಾಗುವ ಒಂದು ಶ್ರವಣ ಸಾಧನವನ್ನು ರೂಪಿಸಿದ್ದಾರೆ.

ಬೆಂಗಳೂರು

ವೈದ್ಯರ ಬಳಿ ಹುಶಾರಿಲ್ಲದೆ ತೆರಳಿದಾಗ ನನಗೆ ಇಂಜೆಕ್ಷನ್ (ಚುಚ್ಚುಮದ್ದು) ಬೇಡವೇ, ಬೇಡ ಎಂದು ಹಠ ಮಾಡಿದ್ದೀರ? ನೀವು ಬೇಡವೆಂದರೂ ರೋಗಕ್ಕೆ ಚುಚ್ಚುಮದ್ದು ಅನಿವಾರ್ಯ ಎಂದು ವೈದ್ಯರು ಕಥೆ ಹೇಳಿ ನಿಮಗೆ ಚುಚ್ಚಿ ನೋವುಂಟು ಮಾಡಿದ್ದಾರಾ? ಮಿತ್ರರೆ, ನಿಮಗೊಂದು ಶುಭಸುದ್ದಿ ಕಾದಿದೆ. ‘ಹಳೆಯ ನೋವನ್ನು’ ಮರೆಯುವ ಸಲುವಾಗಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಯ ವಿಜ್ಞಾನಿಗಳು ಸೂಜಿ-ಮುಕ್ತ, ನೋವುರಹಿತ ಔಷಧಿ ವಿತರಣೆಯ ಹೊಸ ವಿಧಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಆಶ್ಚರ್ಯವಾಗುತ್ತಿದೆಯೆ? ಈ ತಂತ್ರಜ್ಞಾನವನ್ನು ವಾಣಿಜ್ಯೀಕರಣಗೊಳಿಸಿದಲ್ಲಿ ಅತೀ ಶೀಘ್ರದಲ್ಲೆ ಔಷಧಿ ವಿತರಣೆಯಲ್ಲಿ ಬಳಸುವ ಚುಚ್ಚುಮದ್ದುಗಳನ್ನು ಬದಲಿಸಬಹುದು.

ಬೆಂಗಳೂರು

‘ದಿ ಲಾನ್ಸೆಟ್ ಡಯಾಬಿಟಿಸ್ ಅಂಡ್ ಎಂಡೋಕ್ರೈನಾಲಜಿ’ ನಿಯತಕಾಲಿಕದಲ್ಲಿ ಪ್ರಕಟವಾದ ಅಧ್ಯಯನಗಳ ಸರಣಿಯಲ್ಲಿ, ಭಾರತ, ಯು.ಕೆ ಮತ್ತು ಆಸ್ಟ್ರೇಲಿಯಾದ ಸಂಶೋಧಕರ ತಂಡವು ಸಾಂಕ್ರಾಮಿಕವೆಂಬಂತೆ ಹೆಚ್ಚುತ್ತಿರುವ ಟೈಪ್ 2 ಮಧುಮೇಹದ ಬಗ್ಗೆ, ಅದರ ಪ್ರಚಲಿತ ಚಿಕಿತ್ಸೆಯ ಬಗ್ಗೆ, ಜೊತೆಗೆ ಬಾಂಗ್ಲಾದೇಶ, ಭೂತಾನ್, ಭಾರತ, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ದೇಶಗಳ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗಳು ಈ ನಿಟ್ಟಿನಲ್ಲಿ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಅಪ್ ಟು ಡೇಟ್ ಮಾಹಿತಿ ನೀಡುತ್ತದೆ.

ಬೆಂಗಳೂರು

ಯುನೈಟೆಡ್ ಕಿಂಗ್ಡಮ್ನ ಪ್ಲೈಮೌತ್ ವಿಶ್ವವಿದ್ಯಾಲಯ, ಅಮೇರಿಕಾದ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯ,  ಲಂಡನ್ ನ ಇಂಪೀರಿಯಲ್ ಕಾಲೇಜ್ ಮತ್ತು ಭಾರತದ ಟಾಟಾ ಸಮಾಜ ವಿಜ್ಞಾನ ಸಂಸ್ಥೆಯ ಸಂಶೋಧಕರು ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಪಶ್ಚಿಮ ಘಟ್ಟಗಳ ಉತ್ತರ ಭಾಗದಲ್ಲಿನ ಬಂಡೆಗಳಿಂದಾವೃತವಾದ ಪ್ರಸ್ಥಭೂಮಿಗಳಲ್ಲಿ ‘ಬ್ಯಾಟ್ರಾಕೊಖೈಟ್ರಿಯಮ್ ಡೆಂಡ್ರೊಬಾಟಿಡಿಸ್’ನ ಪ್ರಭುತ್ವವನ್ನು ಶೋಧಿಸಿದ್ದಾರೆ. 

ಬೆಂಗಳೂರು

ಬೆಂಗಳೂರಿನ ಅಶೋಕ ಟ್ರಸ್ಟ್ನ ಡಾ. ರವಿಕಾಂತ್ ಮತ್ತು ಅವರ ಸಹೋದ್ಯೋಗಿಗಳು ನಾರ್ವೆಯ ಓಸ್ಲೋ ವಿಶ್ವವಿದ್ಯಾಲಯದ ಸಂಶೋಧಕರ ಸಹಯೋಗದಲ್ಲಿ ನಡೆಸಿದ ಹೊಸ ಅಧ್ಯಯನವೊಂದರಲ್ಲಿ, ಗಾರ್ಸಿನಿಯಾ ಅಥವಾ ಪುನರ್ಪುಳಿ ಹಣ್ಣುಗಳು ಮತ್ತು ಅವುಗಳಿಂದ ತಯಾರಿಸುವ ಪೂರಕ ಆಹಾರಗಳಲ್ಲಿ ಕಲಬೆರಕೆಯಿರುವ ಸಾಧ್ಯತೆಯ ಮೇಲೆ ಕೇಂದ್ರೀಕರಿಸಿದ್ದಾರೆ.

Bengaluru

ಹೊಸ ವರ್ಷ ಬಂದಾಯಿತು, ಆದರೆ ನಾವಿನ್ನು ೨೦೧೮ರ ವರ್ಷಾಗಮನವನ್ನು ಕಳೆದ ವರ್ಷದಲ್ಲಿ ಪ್ರಾರಂಭಿಸಿದ ಕೆಲವು ಚಟುವಟಿಗೆಗಳನ್ನು ಮೆಲಕು ಹಾಕುತ್ತಿದ್ದೇವೆ. ಅವುಗಳಲ್ಲಿ ಪ್ರಮುಖವಾದುದ್ದು  ಪ್ರಾದೇಶಿಕ ಭಾಷೆಗಳಲ್ಲಿ ವೈಜ್ಞಾನಿಕ ಲೇಖನಗಳನ್ನು ಹೊರತರುವುದು. ಪ್ರಾರಂಭಿಕವಾಗಿ ನಾವು ಮೊದಲು ಕನ್ನಡದಲ್ಲಿ ಲೇಖನಗಳನ್ನು ಈಗ ಕಳೆದು ಮೂರು-ನಾಲ್ಕು ವರ್ಷಗಳಿಂದ ಬರೆಯುತ್ತಿದ್ದೇವೆ. ಇದಕ್ಕೆ ನಮಗೆ 'ಪ್ರಜಾವಾಣಿ'ಯಿಂದಲೂ ಬಹಳಷ್ಟು ಪ್ರೋತ್ಸಾಹ ದೊರೆಯಿತು. ಪ್ರತಿ ಸೋಮವಾರ, 'ವಿಜ್ಞಾನ ಲೋಕದಿಂದ' ಎಂಬ ಅಂಕಣದಲ್ಲಿ ನಮ್ಮ ಲೇಖನಗಳು ಮುದ್ರಣವಾಗುತ್ತಿತ್ತು. ಕಳೆದ ವರ್ಷ ನಾವು ಹಿಂದಿ, ಮರಾಠಿ ಮತ್ತು ಅಸ್ಸಾಮೀಸ್ ನಲ್ಲೂ ಲೇಖನಗಳನ್ನು ಪ್ರಕಟಿಸಲು ಪ್ರಾರಂಭಿಸಿದೆವು. ಈ ವರ್ಷ ಇನ್ನಷ್ಟು ಪ್ರಾದೇಶಿಕ ಭಾಷೆಗಳಲ್ಲಿ  ಬಹಳಷ್ಟು ಲೇಖನಗಳು, ಪಾಡ್ಕ್ಯಾಸ್ಟ್ಗಳು, ಮತ್ತು ಇತರೆ ರೀತಿಯಲ್ಲಿ ಪ್ರಕಟಿಸಬೇಕೆಂದಿದ್ದೇವೆ. ಇಲ್ಲಿ ಕಳೆದ ವರ್ಷ ಪ್ರಾದೇಶಿಕ ಭಾಷೆಯಲ್ಲಿ ಪ್ರಕಟಿಸಿದ ಕೆಲವು ಆಯ್ದ ಲೇಖನಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇವೆ.

ಮುಂಬೈ

ಭಾರತೀಯ ತಂತ್ರಜ್ಞಾನ ಸಂಸ್ಥೆ ಬಾಂಬೆಯ (ಐಐಟಿ ಬಾಂಬೆ) ಪ್ರಾಧ್ಯಾಪಕರಾದ ಪ್ರೊ. ಅಮಿತ್ ಅರೋರಾ ಮತ್ತು ಸಂಗಡಿಗರು ದಾಳಿಂಬೆ ಬೀಜದಿಂದ ಎಣ್ಣೆಯನ್ನು ತೆಗೆಯುವ ನವೀನ ವಿಧಾನವನ್ನು ಪ್ರಸ್ಥಾಪಿಸಿದ್ದಾರೆ. ಈ ವಿಧಾನವು ಅತ್ಯoತ ಅಗ್ಗವಾಗಿಯೂ, ತ್ಯಾಜ್ಯ ರಹಿತವಾಗಿಯೂ ಇದ್ದು ಅತೀ ಹೆಚ್ಚು ಗುಣಮಟ್ಟದ ಪ್ರೋಟೀನ್ (ಸಸಾರಜನಕ ಆಹಾರ ಪದಾರ್ಥ) ಮತ್ತು ನಾರಿನ ಅಂಶ ನೀಡಬಲ್ಲದು.

ನಮ್ಮ ಸುತ್ತಮುತ್ತ ಮಧುಮೇಹಿಗಳನ್ನು, ಅದರಲ್ಲೂ, ಇನ್ಸುಲಿನ್ ಚುಚ್ಚುಮದ್ದು ತೆಗೆದುಕೊಳ್ಳುವ ಮಧುಮೇಹಿಗಳನ್ನು ಕಂಡಿರುತ್ತೇವೆ. ಕ್ರಿಕೆಟಿಗ ವಾಸಿಮ್ ಅಕ್ರಮ್ ಬ್ಯಾಟ್ಸಮನ್ ಅನ್ನು ಬೆದರಿಸುವಷ್ಟು ವೇಗದ ಚೆಂಡು ಎಸೆಯುವ ಬೌಲರ್, ಜೊತೆಗೇ, ಇನ್ಸುಲಿನ್ ಅವಲಂಬಿತ ಮಧುಮೇಹಿ ಕೂಡ. 

ಬೆಂಗಳೂರು

ಪ್ರತಿಜೀವಕಗಳು 'ಸೂಪರ್ ಬಗ್' ಸರಣಿಯಲ್ಲಿ ಇದು ಕೊನೆಯ ಭಾಗ. ಇದರಲ್ಲಿ ರೋಗಗಳನ್ನು ಉಂಟುಮಾಡುವ ಬ್ಯಾಕ್ಟೇರಿಯಾಗಳಲ್ಲಿ ಪ್ರತಿಜೀವಕ ನಿರೋಧಕತೆ ಹೇಗೆ ಕಂಡುಬರುತ್ತದೆ, ಅದಕ್ಕೆ ಕಾರಣಗಳು ಮತ್ತು ಅದರಿಂದ ಉಂಟಾಗಬಹುದಾದ ತೀವ್ರತೆಯ ಬಗ್ಗೆ ತಿಳಿಯಬಹುದು. 

ಬೆಂಗಳೂರು

ಈ ಲೇಖನ ಸರಣಿಯಲ್ಲಿ 'ದುರುಪಯೋಗಪಡಿಸಿಕೊಳ್ಳಲಾದ' ಪ್ರತಿಜೀವಕಗಳು 'ಸೂಪರ್ ಬಗ್'ಗಳಿಗೆ ಹೇಗೆ ಸಹಾಯ ಮಾಡುತ್ತಿವೆ ಮತ್ತು ನಾವೇಕೆ ಪ್ರತಿಜೀವಕಗಳನ್ನು ದುರುಪಯೋಗ ಪಡಿಸಿಕೊಂಡಿದ್ದೇವೆ ಎಂಬುದರ ಬಗ್ಗೆ ವಿವರಗಳನ್ನು ನೀಡುತ್ತೇವೆ.

Search Research Matters