ಭಾರತದ ಹಕ್ಕಿಗಳ ವೈವಿಧ್ಯ ತೀವ್ರ ಗತಿಯಿಂದ ಕ್ಷೀಣಿಸುತ್ತಿದೆ. ಅವನ್ನು ಉಳಿಸಲು, ತುರ್ತು ಸಂರಕ್ಷಣಾ ಕ್ರಮಗಳು ಅಗತ್ಯ ಎನ್ನುತ್ತದೆ ಇತ್ತೀಚೆಗೆ ಪ್ರಕಟವಾದ ಭಾರತೀಯ ಹಕ್ಕಿಗಳ ಸ್ಥಿತಿಗತಿಯ ಕುರಿತ ಒಂದು ಸಂಶೋಧನಾ ವರದಿ.

Science

ಬೆಂಗಳೂರು

ಸುಮಾರು ಮೂರು ದಶಕಗಳ ಹಿಂದೆ, ಜರ್ಮನಿಯ ಜೇನುನೊಣ ತಜ್ಞ ಕ್ಲಾಸ್ ವಾರ್ನ್ಕೆ ಅವರು ಭಾರತದ ಲಡಾಖ್ ನ ಸುಂದರವಾದ ಭೂದೃಶ್ಯದಿಂದ ಹೊಸ ಜಾತಿಯ ಕೋಗಿಲೆ-ಜೇನುನೊಣವನ್ನು ಪತ್ತೆ ಮಾಡಿ, ವರದಿ ಮಾಡಿದ್ದರು. ಅವರು ಎಪಿಯೋಲಸ್ ಕುಲಕ್ಕೆ ಸೇರಿದ ಈ ಸಣ್ಣ ಜೇನುನೊಣದ ರೂಪವಿಜ್ಞಾನವನ್ನು ಅಧ್ಯಯನ ಮಾಡಿ, ಅದಕ್ಕೆ ಲಡಾಖ್ ಅನುಗುಣವಾಗಿ, ಎಪಿಯೋಲಸ್ ಲಡಾಖೆನ್ಸಿಸ್ ಎಂದು ನಾಮಕರಣ ಮಾಡಿದರು. ದುರದೃಷ್ಟವಶಾತ್, 1993 ರಲ್ಲಿ ಅವರ ನಿಧನದ ನಂತರ, ಈ ಪ್ರಭೇದದ ಬಗೆಗಿನ ವಿವರಣೆಗಳು ಪ್ರಕಟವಾಗಲಿಲ್ಲ.

ಬೆಂಗಳೂರು

ಅಂಜೂರ ಮರದ ವಿತರಣೆಯು ಕಣಜಗಳ ಪ್ರಸರಣ ವಿಕಾಸದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ಸಂಶೋಧಕರು ಅಧ್ಯಯನ ಮಾಡಿದ್ದಾರೆ

ಮುಂಬೈ

ಶಾಲೆಯಲ್ಲಿ ಕಲಿಯಬೇಕಾದರೆ ಗಣಿತದ ತರಗತಿ ನೆನಪಿದೆಯೇ? ಗಣಿತ ನಮ್ಮಲ್ಲಿ ಬಹುಪಾಲು ಜನರಿಗೆ ಕಬ್ಬಿಣದ ಕಡಲೆಯಾಗಿತ್ತಲ್ಲವೇ? ಅರ್ಧಕ್ಕಿಂತ ಸೂತ್ರಗಳನ್ನು ಸುಮ್ಮನೆ ಬಾಯಿಪಾಠ ಮಾಡಿ ಪರಿಕ್ಷೆಯಲ್ಲಿ ಬರೆಯುತ್ತಿದ್ದುದು ನೆನಪಿದೆಯೇ? ಇಂತಹ ತಲೆನೋವಿನ ಸೂತ್ರಗಳಲ್ಲಿ ಗೋಳದ ಮೇಲ್ಮೈ ವಿಸ್ತೀರ್ಣದ ಸೂತ್ರವೂ ಸಹ ನಾವು ಬಾಯಿಪಾಠ ಮಾಡಿ ಬರೆದ ಸೂತ್ರಗಳಲ್ಲಿ ಒಂದು. ಆ ಅದ್ಭುತವಾದ ಸೂತ್ರಕ್ಕೆ ನಾವು ಹೇಗೆ ಬಂದಿದ್ದೇವೆ ಎಂಬುದರ ಬಗ್ಗೆ ಯಾವುದೇ ತಿಳುವಳಿಕೆಯಿಲ್ಲದೆ ನಾವು ಅದನ್ನು ವಿವಿಧ ಸಂದರ್ಭಗಳಲ್ಲಿ ಬಳಸಿದ್ದೇವೆ.

ಬೆಂಗಳೂರು

“ಬ್ಲಾಕ್ ಗೋಲ್ಡ್” ಅಥವಾ ಕಪ್ಪು ಚಿನ್ನವೆಂದೇ ಕರೆಯಲಾಗುವ ಮೆಣಸು, ಆರ್ಥಿಕವಾಗಿ ಬಹಳಷ್ಟು ಪ್ರಾಮುಖ್ಯತೆ ಹೊಂದಿರುತ್ತದೆ. ಅಲ್ಲದೇ, ಇದರ ಬಗ್ಗೆ ಸಂಶೋಧನೆ ನಡೆಸಲು ಸಂಶೋಧಕರಿಗೆ ಇದು ಒಂದು ಒಳ್ಳೆಯ ವಿಷಯ. ಈ ಮೆಣಸಿನ ಭೌಗೋಳಿಕ ಮೂಲವನ್ನು ಪತ್ತೆ ಮಾಡಲು ಸಂಶೋಧಕರು ತೀವ್ರವಾಗಿ ಅಧ್ಯಯನ ನಡೆಸುತ್ತಿದ್ದಾರೆ. ಭಾರತ ಹಾಗೂ ಗೋಂಡ್ವಾನ ಭೂರಾಶಿಗೆ ಐತಿಹಾಸಿಕ ಸಂಬಂಧವಿದೆಯೆಂದು ಈ ಭಾಗಗಳಿನ ಜೀವವೈವಿಧ್ಯತೆ, ಮುಖ್ಯವಾಗಿ ಪ್ರಭೇದಗಳಲ್ಲಿ ಇರುವ ಹೋಲಿಕೆಯೇ ಈ ಸಂಶೋಧನೆಗೆ ಮುಖ್ಯ ಕಾರಣ. ಅದರಲ್ಲೂ “ಪೈಪರ್” ಅಥವಾ “ಪೆಪ್ಪರ್”  ಪ್ರಭೇದಗಳು  ೬೬-೧೦೦.೫ ದಶಲಕ್ಷ ವರ್ಷಗಳ ಹಿಂದೆ ಈ ಎರಡೂ ಭೂರಾಶಿಗಳಲ್ಲಿ ಬೇರೂರಿವೆಯೆಂದು ಹೇಳಲಾಗಿದೆ.

ಬೆಂಗಳೂರು

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಂಶೋಧಕರ ಒಂದು ತಂಡ ಪಶ್ಚಿಮ ಘಟ್ಟಗಳ ಹಾವುಗಳನ್ನು ಕ್ರಮಬದ್ಧವಾಗಿ ಅಧ್ಯಯನ ನಡೆಸಲು ಪ್ರಯತ್ನಿಸುತ್ತಿದ್ದರು. ಈ ಕ್ರಮಬದ್ಧ ಅಧ್ಯಯನ ನಡೆಸುವಾಗ ಪಶ್ಚಿಮ ಘಟ್ಟಗಳ ಕಾಡುಗಳಿಗೆ ಸ್ವಂತವಾದ “ಪ್ರೊಹೇಟುಲ್ಲಾ ಆಂಟಿಕಾ” ಎನ್ನುವ ಒಂದು ಬಳ್ಳಿಹಾವನ್ನು ಅಕಸ್ಮಾತಾಗಿ ಕಂಡರು. ಇದು ಒಂದು ಪುರಾತನ ಪ್ರಭೇದವೆಂದು, ಸುಮಾರು ೨೬ ಮಿಲಿಯನ್ ವರುಷಗಳ ಹಿಂದೆ, ಮಧ್ಯ ಒಲಿಗೋಸೀನ್ ಯುಗದಲ್ಲಿ ವಿಕಾಸನಗೊಂಡಿತೆಂದು ಅಂದಾಜಿಸಲಾಗಿದೆ.

ಬೆಂಗಳೂರು

ಭಾರತ - ಜಗತ್ತಿನ ಅತೀ ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಗಳಲ್ಲಿ ಅಗ್ರ ರಾಷ್ಟ್ರ. ಜೊತೆಗೆ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಎರಡನೇ ರಾಷ್ಟ್ರ. ಆದರೆ ದುರದೃಷ್ಟದ ಸಂಗತಿಯೇನು ಗೊತ್ತೆ? ಭಾರತದ ಸುಮಾರು 15% ಜನ ಇಂದಿಗೂ ಕತ್ತಲೆಯಲ್ಲೆ ಜೀವನ ನಡೆಸುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಕೇವಲ ಸರ್ಕಾರ ಎಂದರೆ ತಪ್ಪಾಗಬಹುದು. ಭಾರತದ ವಿದ್ಯುತ್ ಪೂರೈಕೆಗೆ ಒಂದೆಡೆ ಅರ್ಥಿಕ ಹಾಗೂ ನೈಸರ್ಗಿಕ ಸಂಪನ್ಮೂಲದ ಕೊರತೆ ಇದ್ದರೆ, ಇನ್ನೊಂದೆಡೆ ಪರಿಸರ ರಕ್ಷಣೆಯ ದೊಡ್ಡ ಜವಾಬ್ದಾರಿಯೂ ತಡೆಯಾಗಿ ನಿಂತಿದೆ. ವಿಶ್ವದ ಅನೇಕ ದೇಶಗಳು ಈಗಾಗಲೆ ನವೀಕರಿಸಬಹುದಾದ ಇಂಧನಗಳ ಸಂಪೂರ್ಣ ಉಪಯೋಗವನ್ನು ಪಡೆದುಕೊಳ್ಳತೊಡಗಿವೆ.

ಬೆಂಗಳೂರು

ಮಳೆಗಾಲ ಪ್ರಾರಂಭವಾಗುತ್ತಿದ್ದಂತೆಯೇ ಕಪ್ಪೆಗಳ ಸಾಮ್ರಾಜ್ಯ ಗೋಚರಿಸುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಮಳೆಗಾಲದಲ್ಲಿ ಎಷ್ಟೋ ಕಪ್ಪೆಗಳು ತಮ್ಮ ಸಂತಾನೋತ್ಪತ್ತಿ ಪ್ರಕ್ರಿಯೆಯತ್ತ ಮುಖ ಮಾಡುತ್ತವೆ. ಆದರೆ, ಇತ್ತೀಚೆಗಷ್ಟೇ, ಈಶಾನ್ಯ ಭಾರತದ, ಅಸ್ಸಾಂ ರಾಜ್ಯದ ಕಾಡುಗಳಲ್ಲಿ ಪತ್ತೆಯಾದ ಕಪ್ಪೆಯ ಹೊಸ ಪ್ರಭೇದವಾದ “ಮಿಕ್ರಿಲೆಟ್ಟ ಐಶಾನಿ” ಮುಂಗಾರು ಪ್ರಾರಂಭವಾಗುವ ಮುನ್ನವೇ ತನ್ನ ಸಂತಾನೋತ್ಪತ್ತಿ ಪ್ರಕ್ರಿಯೆಯನ್ನು ಪ್ರಾರಂಭಿಸಿ, ನಂತರ ಮುಂದಿನ ಮಳೆಗಾಲದವರೆಗೆ ಕಾಣಿಸಿಕೊಳ್ಳುವುದಿಲ್ಲ!

ಬೆಂಗಳೂರು

2015ರಲ್ಲಿ, ಅದೊಂದು ಮಾಮೂಲು ಸುದಿನ. ಪುಣೆಯ ಅಘರ್ಕರ್ ಸಂಶೋಧನಾ ಕೇಂದ್ರದ, ವಿಜ್ಞಾನಿಯಾದ ಡಾ. ರಿತೇಶ್ ಕುಮಾರ್ ಚೌಧರಿಯನ್ನು ಕಾಣಲು ಬಂದಿದ್ದ, ಬೆಂಗಳೂರಿನ ಎಂ. ಈ. ಎಸ್. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಜಿ. ರಾಮಚಂದ್ರ ರಾವ್, ಉತ್ತರ ಕನ್ನಡ ಜಿಲ್ಲೆಯಿಂದ, ಚಿಕ್ಕ ಹೂಗಳಿರುವ, ಹುಲ್ಲಿನಂತೆ ಕಾಣುವ ಕೆಲ ಗಿಡಗಳ ಮಾದರಿಗಳನ್ನು ತಂದು, ಅದನ್ನು ಗುರುತಿಸಲು ಡಾ. ಚೌಧರಿಯ ಸಹಾಯ ಕೋರಿದರು. ಡಾ. ಚೌಧರಿಯವರು ಅದನ್ನು ಕೂಡಲೇ ಒಂದು ‘ಪೈಪ್ವರ್ಟ್’ ಅಥವಾ ಹೂಬಿಡುವ ಏಕದಳದ ಒಂದು ಪ್ರಭೇದ ಎಂದು ಗುರುತಿಸಿದರು. ಆದರೆ, ಇದು ಯಾವ ಪ್ರಭೇದವೆನ್ನುವುದು ಒಂದು ದೊಡ್ಡ ಯಕ್ಷ ಪ್ರಶ್ನೆಯಾಗಿತ್ತು!

ಬೆಂಗಳೂರು

ಇತ್ತೀಚಿನ ಅಧ್ಯಯನವೊಂದರ ಭಾಗವಾಗಿ, ಕೇರಳದ ಪಶ್ಚಿಮ ಘಟ್ಟಗಳಲ್ಲಿ ಮತ್ತೊಂದು ಹೊಸ ಪ್ರಭೇದದ ಕಪ್ಪೆಯನ್ನು ಸಂಶೋಧಕರು ಪತ್ತೆಹಚ್ಚಿದ್ದಾರೆ. ‘ಮೈಕ್ರೊಹೈಲಾ ಡಾರ್ರೆಲಿ’ ಎಂಬ ಹೆಸರಿನ ಈ ಕಪ್ಪೆ, ‘ಮೈಕ್ರೊಹೈಲಾ’ ಕುಲಕ್ಕೆ ಸೇರಿದ ಜೀವಿಯಾಗಿದೆ; ಈ ಕುಲದ ಕಪ್ಪೆಗಳಿಗೆ ‘ಕಿರಿ ಮೂತಿಯ ಕಪ್ಪೆ’ (ನ್ಯಾರೋ ಮೌಥ್ಡ್ ಫ್ರಾಗ್) ಎಂಬ ಸಾಮಾನ್ಯ ಹೆಸರಿದ್ದು, ಇದಕ್ಕೆ ಕಾರಣ ಅವುಗಳ ತ್ರಿಕೋನಾಕಾರದ ಪುಟ್ಟ ದೇಹ ಮತ್ತು  ಕಿರಿದಾದ ಮೂತಿ.  ಈ ಕುಲದ ಕಪ್ಪೆಗಳು ಜಪಾನ್, ಚೀನಾ, ಭಾರತ, ಶ್ರೀಲಂಕಾ ಮತ್ತು ಆಗ್ನೇಯ ಏಷ್ಯಾದಲ್ಲಿ ಹೆಚ್ಚಾಗಿ ಕಂಡುಬರುತ್ತವೆ.

Search Research Matters