ಬಾವಲಿಗಳು ತಮ್ಮ ಪಾಡಿಗೆ ತಾವು ರಾತ್ರಿಯಲ್ಲಿ ಹಾರಾಡುವ ಸಸ್ತನಿಗಳು. ಇವು ಪ್ರಪಂಚದಾದ್ಯಂತ ಹರಡಿದ್ದು, ಇವುಗಳಲ್ಲಿ ಸುಮಾರು ೧೨೦೦ ಪ್ರಭೇದಗಳಿವೆ. ಈಗಿನ ಲಾಕ್ ಡೌನ್ ಗೆ ಕಾರಣವಾಗಿರುವ ಕೋವಿಡ್-೧೯ ಸಾಂಕ್ರಾಮಿಕವನ್ನು ಬಾವಲಿಗಳು ಹರಡುತ್ತಿವೆ ಎಂದು ಜನರು ತಿಳಿದಿದ್ದಾರೆ. ಇದಕ್ಕೆ ಪೂರಕವಾಗಿ, ಕೆಲವೇ ದಿನಗಳ ಹಿಂದೆ, ICMR (ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್)ನ ಅಧ್ಯಯನವೊಂದು ದಕ್ಷಿಣ ಭಾರತದಲ್ಲಿ ಕಂಡುಬರುವ ಬಾವಲಿಗಳಲ್ಲಿ “ಬ್ಯಾಟ್-ಕೊರೊನ ವೈರಸ್” ಇದೆ ಎಂಬುದು ಬೆಳಕಿಗೆ ಬಂದಿದೆ. ಇದನ್ನೆಲ್ಲಾ ಓದಿದ ಜನ, ಭಯಭೀತರಾಗಿ ಕೆಲವೆಡೆ ಬಾವಲಿಗಳನ್ನು ಕೊಲ್ಲುವ ನಿರ್ಧಾರ ಮಾಡಿದ್ದಾರೆ. ಕೆಲವರಂತೂ ಮನೆ ಅಂಗಳದಲ್ಲಿರುವ ಸಪೋಟಾ, ಮಾವು ಹಾಗೂ ಬಾವಲಿಗಳು ಬರುವ ಇತರ ಗಿಡ-ಮರಗಳನ್ನು ಕಡಿಯುತ್ತಿದ್ದಾರೆ.
Society
ನೈಸರ್ಗಿಕ ವಿಕೋಪಗಳ ಪೈಕಿ ಭೂಕಂಪನವು ಅತಿ ವಿನಾಶಕಾರಿ ಮತ್ತು ಭಯ ಹುಟ್ಟಿಸುವಂತದ್ದು. ರಿಕ್ಟರ್ ಮಾಪಕದಲ್ಲಿ 5.0 ಅಥವಾ ಅದಕ್ಕಿಂತ ಹೆಚ್ಚಿನ ಪರಿಮಾಣದ ಸರಿಸುಮಾರು 5 ಭೂಕಂಪಗಳು ಪ್ರತಿದಿನ ಭೂಮಿಯ ಮೇಲೆ ಸಂಭವಿಸುತ್ತಲೇ ಇರುತ್ತವೆ. ಸ್ವತಃ ಭೂಕಂಪನಗಳೇ ವಿನಾಶಕಾರಿಯಾಗಿದ್ದು, ಇದರಿಂದ ಉಂಟಾಗಬಹುದಾದ ಸುನಾಮಿ ಅಲೆಗಳಿಂದಲೂ ತಮ್ಮ ಪ್ರಭಾವವನ್ನು ಬೀರಬಲ್ಲವಾಗಿವೆ. ಸಹಜವಾಗಿ ಭೂಕಂಪನದ ತೀವ್ರತೆ, ಅಧಿಕೇಂದ್ರದಿಂದ ಇರುವ ದೂರ ಮತ್ತು ಆ ಪ್ರದೇಶದ ನೆಲದ ಸ್ವರೂಪ, ಹೀಗೆ ಕೆಲವು ಅಂಶಗಳು ಸಾಮಾನ್ಯವಾಗಿ ಭೂಕಂಪನದಿಂದ ಉಂಟಾಗುವ ಹಾನಿಯನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ.
ನಾವೆಲ್ಲರೂ ಓದುವುದನ್ನು ಹೇಗೆ ಕಲಿತೆವು ಎಂದು ನೆನಪಿಸಿಕೊಂಡರೆ- ಮೊದಲಿಗೆ ನಾವು ಪ್ರತಿಯೊಂದು ಅಕ್ಷರ ಹೇಗೆ ಉಚ್ಚರಿಸುವುದು ಎಂದು ಕಲಿಯುತ್ತೇವೆ. ನಂತರ ಪೂರ್ತಿ ಪದ(ಗಳು) ಮತ್ತು ವಾಕ್ಯಗಳನ್ನು ಸುಲಭವಾಗಿ ಹೇಳಲು ಕಲಿಯುತ್ತೇವೆ. ಆದರೆ, ನಾವು ಓದಲು ಕಲಿಯುವಾಗ, ನಮ್ಮ ಮೆದುಳಿನಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತವೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ನಾವೆಲ್ಲರೂ ಸಿಂಧೂ ನಾಗರಿಕತೆಯ ಬಗ್ಗೆ ಕೇಳಿದ್ದೇವೆ. ಸುಮಾರು ಕ್ರಿಸ್ತ ಪೂರ್ವ ಮೂರನೇ ಸಹಸ್ರಮಾನದ ಅವಧಿಯಲ್ಲಿ ಈ ಪುರಾತನ ಕಂಚಿನ ಯುಗದ ನಾಗರಿಕತೆಯು, ವಾಯುವ್ಯ ಏಷ್ಯಾದಲ್ಲಿ ಅಭಿವೃದ್ಧಿ ಹೊಂದಿತು. ಈ ನಾಗರಿಕತೆಯು ಉತ್ತಮವಾದ ಹಗೇವು (ಧಾನ್ಯಾಗಾರ)ಗಳು, ಒಳಚರಂಡಿ ವ್ಯವಸ್ಥೆ ಮತ್ತು ವ್ಯವಸ್ಥಿತವಾಗಿ ನಿರ್ಮಿಸಲಾಗಿದ್ದ ನಗರಗಳಾದ ಹರಪ್ಪಾ ಮತ್ತು ಮೊಹೆಂಜೊದಾರೊಗಳಿಗೆ ಪ್ರಸಿದ್ಧವಾಗಿದೆ. ಇದರ ಅಭಿವೃದ್ಧಿ ಮತ್ತು ಅವನತಿಗಳ ಬಗ್ಗೆ ವಿಸ್ತಾರವಾಗಿ ಗೊತ್ತಿಲ್ಲದಿದ್ದರೂ, ಇದರ ಕುರಿತಾದ ಅನೇಕ ಸಿದ್ಧಾಂತಗಳಿವೆ. ಈ ಕಾರಣಕ್ಕಾಗಿ ಇತಿಹಾಸಕಾರರು ಒಂದು ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲ.
ಶಾಲೆಯಲ್ಲಿ ಕಲಿಯಬೇಕಾದರೆ ಗಣಿತದ ತರಗತಿ ನೆನಪಿದೆಯೇ? ಗಣಿತ ನಮ್ಮಲ್ಲಿ ಬಹುಪಾಲು ಜನರಿಗೆ ಕಬ್ಬಿಣದ ಕಡಲೆಯಾಗಿತ್ತಲ್ಲವೇ? ಅರ್ಧಕ್ಕಿಂತ ಸೂತ್ರಗಳನ್ನು ಸುಮ್ಮನೆ ಬಾಯಿಪಾಠ ಮಾಡಿ ಪರಿಕ್ಷೆಯಲ್ಲಿ ಬರೆಯುತ್ತಿದ್ದುದು ನೆನಪಿದೆಯೇ? ಇಂತಹ ತಲೆನೋವಿನ ಸೂತ್ರಗಳಲ್ಲಿ ಗೋಳದ ಮೇಲ್ಮೈ ವಿಸ್ತೀರ್ಣದ ಸೂತ್ರವೂ ಸಹ ನಾವು ಬಾಯಿಪಾಠ ಮಾಡಿ ಬರೆದ ಸೂತ್ರಗಳಲ್ಲಿ ಒಂದು. ಆ ಅದ್ಭುತವಾದ ಸೂತ್ರಕ್ಕೆ ನಾವು ಹೇಗೆ ಬಂದಿದ್ದೇವೆ ಎಂಬುದರ ಬಗ್ಗೆ ಯಾವುದೇ ತಿಳುವಳಿಕೆಯಿಲ್ಲದೆ ನಾವು ಅದನ್ನು ವಿವಿಧ ಸಂದರ್ಭಗಳಲ್ಲಿ ಬಳಸಿದ್ದೇವೆ.
ಜಾಗತಿಕವಾಗಿ, ಹುಟ್ಟಿದ ನಂತರ ಕಿವುಡುತನದ ಪರೀಕ್ಷೆಗೆ ಒಳಪಡುವ ಪ್ರತಿ 1000 ಹಸುಗೂಸುಗಳಲ್ಲಿ 6 ಮಕ್ಕಳು ಕಿವುಡುತನದ ಸಮಸ್ಯೆಯಿಂದ ಬಳಲುತ್ತಿರುತ್ತಾರೆ ಮತ್ತು ಅವರಲ್ಲಿ 200ಕ್ಕಿಂತಲೂ ಕಡಿಮೆ ಮಕ್ಕಳಿಗೆ ಮಾತ್ರ ವಾಕ್ ಚಿಕಿತ್ಸಕರು ಲಭ್ಯವಿದ್ದಾರೆ. ಭಾರತದಂತಹ ದೇಶಗಳಲ್ಲೂ ಪರಿಸ್ಥಿತಿ ಕೆಟ್ಟದಾಗಿದ್ದು, ಬಡತನದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಿರುತ್ತದೆ ಮತ್ತು ಆರೋಗ್ಯ ಸೇವೆಗಳು ಅಷ್ಟು ಸುಲಭವಾಗಿ ಲಭ್ಯವಿರುವುದಿಲ್ಲ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಸಂಶೋಧಕರು ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ, ಭಾರತೀಯ ಸನ್ನಿವೇಶದಲ್ಲಿ ವಿಶೇಷವಾಗಿ ಉಪಯುಕ್ತವಾಗುವ ಒಂದು ಶ್ರವಣ ಸಾಧನವನ್ನು ರೂಪಿಸಿದ್ದಾರೆ.
ನಮ್ಮ ಬೆಂಗಳೂರಿನ ವಾಹನಗಳು ಟ್ರಾಫಿಕ್ ನ ಸಮಸ್ಯೆಯಿಂದ ವೇಗವಾಗಿ ಚಲಿಸದೇ ಇರಬಹುದು. ಆದರೆ ಬೆಳವಣಿಗೆಯ ದೃಷ್ಟಿಯಿಂದ ಬೆಂಗಳೂರು ಇಂದಿಗೂ ಕೂಡ ಅತೀ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದು.ಹೀಗೆ ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ, ‘ನಗರ ಸುಧಾರಣೆಯ’ ಮೂಲ ಅರ್ಥ ನಮ್ಮೆಲ್ಲರ ದೃಷ್ಟಿಯಲ್ಲಿ ರಸ್ತೆ, ನೀರು , ನೈರ್ಮಲ್ಯಾಭಿವೃದ್ಧಿ, ಅನಿಯಮಿತ ವಸತಿಗಳ ನಿರ್ಮೂಲನೆ ಇತ್ಯಾದಿ ಆಗಿರಬಹುದು. ಇಂತಹ ಯೋಜನೆಗಳನ್ನು ನಾವು ದಿನಬೆಳಗಾದರೆ ದಿನಪತ್ರಿಕೆಗಳಲ್ಲಿ, ದೂರದರ್ಶನಗಳಲ್ಲಿ ವ್ಯಾಪಕವಾಗಿ ನೋಡುತ್ತೇವೆ ಕೂಡ.
ವೈವಿಧ್ಯತೆಯಲ್ಲಿ ಶ್ರೀಮಂತವೆನಿಸಿದ ತಾಣವಾದ ಭಾರತದಲ್ಲಿ ಹಲವಾರು ಬಗೆಯ ಸಂಸ್ಕೃತಿಗಳನ್ನು ನಾವು ಕಾಣಬಹುದು. ಇಲ್ಲಿ ಮಾತನಾಡಲಾಗುವ ಹೆಚ್ಚಿನ ಸಂಖ್ಯೆಯ ಭಾಷೆಗಳೇ ಇದಕ್ಕೆ ಒಂದು ಪ್ರಮಾಣಪತ್ರವಾಗಿದೆ. ಈ ಭಾಷೆಗಳನ್ನು ಕಲಿಯುವುದು ಆಸಕ್ತಿಕರವೇನೋ ಹೌದು; ಜೊತೆಗೇ, ಅವುಗಳನ್ನು ಅಧ್ಯಯನ ಮಾಡುವುದು ಇನ್ನೊಂದು ಕಾರಣಕ್ಕಾಗಿ ಆಕರ್ಷಕವಾಗಿದೆ; ಅದೇನೆಂದರೆ ಭಾರತೀಯ ಆರ್ಯ ಭಾಷಿಕರು ಕ್ರಿಸ್ತ ಪೂರ್ವ ೧೫೦೦ರಲ್ಲಿ ಆಗಮಿಸುವ ಮೊದಲು, ಭಾರತೀಯ ಉಪಖಂಡದಲ್ಲಿ ವಾಸವಾಗಿದ್ದ ದ್ರಾವಿಡರ ಅಲ್ಪ-ಪ್ರಸಿದ್ಧ ಇತಿಹಾಸವನ್ನು ಅರ್ಥಮಾಡಿಕೊಳ್ಳಲು ಈ ಭಾಷೆಗಳು ನಮಗೆ ಸಹಾಯ ಮಾಡುತ್ತವೆ. ಇಲ್ಲಿಯವರೆಗೆ, ದ್ರಾವಿಡರ ಮೂಲ ಮತ್ತು ದೇಶದಾದ್ಯಂತ ಅವರ ಪ್ರಸರಣದ ಬಗ್ಗೆ ಹೆಚ್ಚು ತಿಳಿದಿಲ್ಲ.
‘ದಿ ಲಾನ್ಸೆಟ್ ಡಯಾಬಿಟಿಸ್ ಅಂಡ್ ಎಂಡೋಕ್ರೈನಾಲಜಿ’ ನಿಯತಕಾಲಿಕದಲ್ಲಿ ಪ್ರಕಟವಾದ ಅಧ್ಯಯನಗಳ ಸರಣಿಯಲ್ಲಿ, ಭಾರತ, ಯು.ಕೆ ಮತ್ತು ಆಸ್ಟ್ರೇಲಿಯಾದ ಸಂಶೋಧಕರ ತಂಡವು ಸಾಂಕ್ರಾಮಿಕವೆಂಬಂತೆ ಹೆಚ್ಚುತ್ತಿರುವ ಟೈಪ್ 2 ಮಧುಮೇಹದ ಬಗ್ಗೆ, ಅದರ ಪ್ರಚಲಿತ ಚಿಕಿತ್ಸೆಯ ಬಗ್ಗೆ, ಜೊತೆಗೆ ಬಾಂಗ್ಲಾದೇಶ, ಭೂತಾನ್, ಭಾರತ, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ದೇಶಗಳ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗಳು ಈ ನಿಟ್ಟಿನಲ್ಲಿ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಅಪ್ ಟು ಡೇಟ್ ಮಾಹಿತಿ ನೀಡುತ್ತದೆ.